ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾಗಿ ದಯಾನಂದ ಎಸ್. ಪಾಟೀಲ್ ರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿಯಾಗಿರುವ ದಯಾನಂದ ಪಾಟೀಲ್ ಅವರು ಮಾಜಿ ಸಂಸದ ದಿವಂಗತ ಎಸ್. ಟಿ. ಪಾಟೀಲ್ ಅವರ ಪುತ್ರ.

ಬಿ.ಎ., ಎಲ್ಎಲ್.ಬಿ ಪದವೀಧರರಾಗಿರುವ ಇವರು 2007ರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದು, 2017ರಿಂದ 2022ರವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಾರ್ಯದರ್ಶಿಯಾಗಿದ್ದರು. 2022ರಿಂದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಉತ್ತರ ಕರ್ನಾಟಕದ 36 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಲ್ಎ (BLA)ಗಳಿಗೆ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ. 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಸಂಸದೀಯ ಕ್ಷೇತ್ರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಎಐಸಿಸಿ (AICC) ಜವಾಬ್ದಾರಿಗಳು:

2022ರ ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನುವೆಮ್ ವಿಧಾನಸಭಾ ಕ್ಷೇತ್ರದ ಎಐಸಿಸಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

2014, 2019 ಮತ್ತು 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಎಲ್ಲಾ ಅಂಶಗಳು ಅವರಿಗೆ ಪಕ್ಷದ ಜಿಲ್ಲಾ ಅಧ್ಯಕ್ಷ ಒಲಿದುಬರಲು ಪೂರಕವಾಗಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor