×
Ad

ರಾಮನಗರ | ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Update: 2024-04-29 17:49 IST

ಸಾಂದರ್ಭಿಕ ಚಿತ್ರ

ರಾಮನಗರ : ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ 5 ಜನ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತ, ಅಭಿಷೇಕ್, ತೇಜಸ್, ವರ್ಷ, ಸ್ನೇಹ  ಎಂದು ಹೇಳಲಾಗಿದೆ.

ಪ್ರವಾಸಕ್ಕೆ ಬಂದಿದ್ದ ಮೂವರು ಯುವತಿಯರು, ಇಬ್ಬರು ಯುವಕರು  ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನೀರಿನ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News