×
Ad

ಪತ್ರಕರ್ತರ ಸಂಘದ ಚುನಾವಣೆ: ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆ

Update: 2025-11-09 18:56 IST

ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ)2025-28ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ನೇತೃತ್ವದ ಪದಾಧಿಕಾರಿಗಳ ತಂಡ ಅವಿರೋಧವಾಗಿ ಆಯ್ಕೆಯಾಗಿದೆ.

ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದ್ದು, ಒಂಬತ್ತು ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ ಎಂದು ಘೋಷಿಸಿದ್ದಾರೆ. ಉಪಾಧ್ಯಕ್ಷರು-ಎಚ್.ಬಿ. ಮದನ ಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ-ಜಿ.ಸಿ. ಲೋಕೇಶ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಗಳಾಗಿ-ನಿಂಗಪ್ಪ ಚಾವಡಿ, ಪುಂಡಲೀಕ ಬಾಲೋಜಿ, ಸೋಮಶೇಖರ ಕೆರೆಗೋಡು ಹಾಗೂ ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಆಯ್ಕೆಯಾಗಿದ್ದಾರೆ ಎಂದು ರವಿಕುಮಾರ್ (ಟೆಲೆಕ್ಸ್) ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News