×
Ad

ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ನೂತನ ಅಧ್ಯಕ್ಷರಾಗಿ ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಆಯ್ಕೆ

Update: 2026-05-17 23:54 IST

ಹುಬ್ಬಳ್ಳಿ : ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ನೂತನ ಅಧ್ಯಕ್ಷರಾಗಿ ಹಝರತ್ ಖ್ವಾಜಾ ಬಂದೇ ನವಾಝ್ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಡಾ. ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಆಲ್ ಕರ್ನಾಟಕ ಸುನ್ನಿ ಮಶಾಯಿಖ್ ಕೌನ್ಸಿಲ್ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ರವಿವಾರ ನಡೆದ ರಾಜ್ಯಮಟ್ಟದ ಸಾಮಾನ್ಯ ಸಭೆಯಲ್ಲಿ ಹಝರತ್ ಸೈಯದ್ ಶಾ ಹಸನ್ ಶಬ್ಬಿರ್ ಮುಹಮ್ಮದ್ ಅಲ್ ಹುಸೇನಿ ಅವರು ನೂತನ ಅಧ್ಯಕ್ಷರನ್ನು ಘೋಷಣೆ ಮಾಡಿದರು.

ಸೂಫಿ ಪರಂಪರೆಯ ಉಳಿವಿಗಾಗಿ ಎಲ್ಲರೂ ಪ್ರೀತಿ ಮತ್ತು ವಿಶ್ವಾಸ ಹಾಗೂ ಸಹಬಾಳ್ವೆಯೊಂದಿಗೆ ಮುನ್ನಡೆಯುವುದು ಅವಶ್ಯವಾಗಿದ್ದು, ಪ್ರಸಕ್ತ ಸಮಾಜದಲ್ಲಿ ಉದ್ಭವಿಸುತ್ತಿರುವ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮತ್ತು ವಕ್ಫ್ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಭೆಗೆ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

ಸಭೆಯ ಅಧ್ಯಕ್ಷತೆಯನ್ನು ಹಝರತ್ ಪೀರ್ ಸೈಯದ್ ಮೊಹಮ್ಮದ್ ಹಶ್ಮಿ ಜವಾದೇಶ್ ಮಿಯಾ ಸಾಹೇಬ್ ರೌಜಾ ನಗರ ಶರೀಫ್ ವಹಿಸಿದ್ದರು. ಈ ಸಂದರ್ಭದಲ್ಲಿ ಹಝರತ್ ಸೈಯದ್ ಮುರ್ತಜಾ ಮುಫ್ತಿ ಸಾಹೇಬ್ ಖಾದರಿ, ಡಾ.ಹಝರತ್ ಖ್ವಾಜಾ ಶಾಹ್ ಫಝ್ಲುದ್ದಿನ್ ಜುನೈದ್, ಹಝರತ್ ತಾಜುದ್ದೀನ್ ಖಾದ್ರಿ, ಮಶಾಯಿಖ್‌ಗಳು, ಉಲಮಾಗಳು ಮತ್ತು ಸದಸ್ಯರು ಭಾಗಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News