×
Ad

‘ಜೈ ಬಾಪು, ಜೈ ಭೀಮ್ ಸಮಾವೇಶ’ | ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5ಲಕ್ಷ ರೂ.ಪರಿಹಾರ : ಡಿ.ಕೆ.ಶಿವಕುಮಾರ್

Update: 2025-01-22 21:22 IST

ಬೆಂಗಳೂರು : ಬೆಳಗಾವಿಯಲ್ಲಿ ನಿನ್ನೆ ನಡೆದ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ವತಿಯಿಂದ 5ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಬುಧವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೆಳಗಾವಿಯಲ್ಲಿ ಜ.21ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಕೆಂಚಪ್ಪ ಕುಸಿದು ಬಿದ್ದು ಅಸ್ವಸ್ಥರಾಗಿ ಅಸುನೀಗಿದ್ದರು. ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಶಿವಕುಮಾರ್, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News