×
Ad

ಅ.9ರಂದು ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಕಾರ್ಯಕ್ರಮ

Update: 2025-10-04 23:29 IST

ಸಾಂದರ್ಭಿಕ ಚಿತ್ರ | PC : PTI


ಬೆಂಗಳೂರು, ಅ.4: ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಾ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳಾದ ಹಿನ್ನೆಲೆಯಲ್ಲಿ ಅ.9ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ.

ಅಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಎಲ್ಲ ಜಿಲ್ಲೆಗಳಲ್ಲಿ ಸೌಜನ್ಯಾ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಸಭೆ, ಮನವಿ ಪತ್ರ ಸಲ್ಲಿಕೆ, ಗೀತೆಗಳ ಗಾಯನ ಕಾರ್ಯಕ್ರಮಗಳು ನಡೆಯಲಿವೆ.

ಹಲವು ಜನಪರ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಕಾರ್ಯಕ್ರಮದಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿ, ತಹಶೀಲ್ದಾ‌ರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಹಕ್ಕೊತ್ತಾಯಗಳು

ಸೌಜನ್ಯಾ ಅತ್ಯಾಚಾರ-ಕೊಲೆ ಆರೋಪಿಗಳನ್ನು ಬಂಧಿಸಬೇಕು. ಸೌಜನ್ಯಾ ಸೇರಿ ವೇದವಲ್ಲಿ, ಪದ್ಮಲತಾ, ಯಮುನಾ, ಮಾವುತ ನಾರಾಯಣ ಕೊಲೆ ಪ್ರಕರಣಗಳ ಮರು ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಅಸಹಜ ಸಾವುಗಳ ಎಸ್‌ಐಟಿ ತನಿಖೆ ನ್ಯಾಯಯುತವಾಗಿ ನಡೆಯಬೇಕು. ಧರ್ಮಸ್ಥಳ ಭೂ ಹಗರಣ, ಮೈಕ್ರೋ ಫೈನಾನ್ಸ್ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಆಗ್ರಹಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News