×
Ad

ಇತ್ತೀಚಿಗಷ್ಟೇ ಐಟಿ ದಾಳಿಗೊಳಗಾದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ

Update: 2023-11-27 22:47 IST

ಬೆಂಗಳೂರು: ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಐಟಿ ದಾಳಿ ವೇಳೆ ತಮ್ಮ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ನಂತರ ಅಂಬಿಕಾಪತಿ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನ.27ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಐಟಿ ಅಧಿಕಾರಿಗಳು ಕಳೆದ ಅಕ್ಟೋಬರ್‌ನಲ್ಲಿ ಅಂಬಿಕಾಪತಿ ಅವರ ಮನೆಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವರ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ನಗದು ಪತ್ತೆಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News