ಬೆಂಗಳೂರು | ಪಾರ್ಕ್‍ನಲ್ಲಿ ಕುಳಿತಿದ್ದ ಇಬ್ಬರ ಭೀಕರ ಹತ್ಯೆ

Update: 2024-04-18 14:41 GMT

ಬೆಂಗಳೂರು : ಇಲ್ಲಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‍ನಲ್ಲಿ ಕುಳಿತಿದ್ದ ಇಬ್ಬರನ್ನು ಕಿಡಿಗೇಡಿಗಳು ಹತ್ಯೆಗೈದಿರುವ ಘಟನೆ ಗುರುವಾರ ವರದಿಯಾಗಿದೆ.

ಅನುಶಾ ಮತ್ತು ಸುರೇಶ್ ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಎ.18ರ ಗುರುವಾರ ಸಂಜೆ 4:15ರ ಸುಮಾರಿಗೆ ಏಕಾಏಕಿ ಇಬ್ಬರನ್ನೂ ಚಾಕುವಿನಿಂದ ಇರಿದು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News