ಬೆಂಗಳೂರು | ಐದನೆ ಮಹಡಿಯಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ

Update: 2024-05-09 13:20 GMT

ಬೆಂಗಳೂರು : ಕೆಲಸ ಹುಡುಕಿಕೊಂಡು ನಗರಕ್ಕೆ ಬಂದ ಒಂದೇ ದಿನದಲ್ಲಿ ಯುವಕನೋರ್ವ ಇಲ್ಲಿನ ವೈಟ್‍ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದ ಪಿ.ಜಿ.ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಅಂಬೇಡ್ಕರ್ ನಗರದ ಪಿ.ಜಿ.ಯೊಂದರಲ್ಲಿ ವಾಸ್ತವ್ಯ ಹೂಡಿದ್ದ ಅರುಣ್ ಕುಮಾರ್(28) ಎಂಬಾತ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಕಲಬುರಗಿ ಮೂಲದ ಅರುಣ್ ಕುಮಾರ್ ಕೆಲಸ ಅರಸಿ ಮೇ 8ರಂದು ಬೆಂಗಳೂರಿಗೆ ಬಂದಿದ್ದ. ಮೇ 9ರ ಗುರುವಾರ ಬೆಳಗ್ಗೆ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತನ ಪೋಷಕರಿಗೆ ವಿಷಯ ತಿಳಿಸಲಾಗಿದ್ದು, ಅವರು ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News