ಬೆಂಗಳೂರು | ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಪರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪ್ರಚಾರ

Update: 2024-04-19 14:17 GMT

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ. ರಾಜೀವ್ ಗೌಡ ಅವರ ಪರವಾಗಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶುಕ್ರವಾರ ಕ್ಷೇತ್ರ ವ್ಯಾಪ್ತಿಯಲ್ಲಿನ ಚಿಕ್ಕನಹಳ್ಳಿ, ಅಜ್ಜನಹಳ್ಳಿ, ಚೋಳನಾಯಕನಹಳ್ಳಿ, ಚನ್ನೇನಹಳ್ಳಿ ಮತ್ತು ತವರೇಕೆರೆ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಪ್ರಚಾರ ನಡೆಸಿದರು. ‘ಅತ್ಯಂತ ಹೆಚ್ಚಿನ ಮತಗಳಿಂದ ರಾಜೀವ್ ಗೌಡ ಅವರನ್ನು ಗೆಲ್ಲಿಸಬೇಕು’ ಎಂದು ಸೋಮಶೇಖರ್ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಬ್ಲಾಕ್ ಅಧ್ಯಕ್ಷ ರೇವಣ ಸಿದ್ದಪ್ಪ, ತಾ.ಪಂ.ಅಧ್ಯಕ್ಷ ಚಂದ್ರಣ್ಣ, ಮುಖಂಡರಾದ ಚಾಂದ್ ಪಾಶಾ, ಆನಂದಸ್ವಾಮಿ, ಲತಾ, ಮನೋಹರ್, ರೇಣುಕಮ್ಮ, ಗಿರೀಶ್, ಜೈಕುಮಾರ್, ನಾರಾಯಣಸ್ವಾಮಿ, ಕೆಂಪೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News