×
Ad

ಬೆಂಗಳೂರು | ಸಾಲಗಾರರ ಕಿರುಕುಳ, ವ್ಯಕ್ತಿ ಆತ್ಮಹತ್ಯೆ

Update: 2025-01-30 22:24 IST

ಬೆಂಗಳೂರು : ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅರುಣ್ (38) ಆತ್ಮಹತ್ಯೆ ಮಾಡಿಕೊಂಡಿದ್ದು, ಅರುಣ್ ಅವರ ತಂದೆ ದೇವರಾಜ್ ನೀಡಿದ ದೂರಿನ ಮೇರೆಗೆ ಸಾಲ ನೀಡಿದ್ದ ದಿನೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕಾಶ್ ನಗರದಲ್ಲಿ ಕಳೆದ 20 ವರ್ಷಗಳಿಂದ ಅರುಣ್ ವಾಸಿಸುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವ್ಯವಹಾರದ ಸಲುವಾಗಿ ಪೂಜಾ ಎಂಟರ್‍ಪ್ರೈಸಸ್ ಹೆಸರಿನಲ್ಲಿ ಫೈನಾನ್ಸ್ ನಡೆಸುತ್ತಿದ್ದ ದಿನೇಶ್ ಎಂಬವರನ್ನು 15 ದಿನಗಳ ಹಿಂದೆ ಭೇಟಿ ಮಾಡಿದ್ದ ಅರುಣ್, 6 ಲಕ್ಷ ರೂ ಸಾಲ ಪಡೆದುಕೊಂಡಿದ್ದರು. ಇದಕ್ಕೆ ಶ್ಯೂರಿಟಿಯಾಗಿ ತಮ್ಮ ಕಾರನ್ನು ಒಪ್ಪಿಸಿದ್ದರು ಎನ್ನಲಾಗಿದೆ.

ವಾಯಿದೆಯಂತೆ 6 ಲಕ್ಷ ಹಣ ಹೊಂದಿಸಲು ಸಾಧ್ಯವಾಗದೆ 1.50 ಲಕ್ಷ ಹಣವನ್ನು ಅರುಣ್ ನೀಡಲು ಮುಂದಾದಾಗ ಬೆದರಿಕೆ ಹಾಕಿದಲ್ಲದೆ, ಹಲ್ಲೆ ನಡೆಸಲಾಗಿತ್ತು.ಇದರಿಂದ ನೊಂದು ಜ.23ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಅರುಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News