×
Ad

ಬೆಂಗಳೂರು | ಪಿ.ಜಿಗೆ ನುಗ್ಗಿ ಯುವತಿ ಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

Update: 2024-07-27 12:45 IST

 ಕೃತಿ ಕುಮಾರಿ (24) 

ಬೆಂಗಳೂರು : ಕೋರಮಂಗಲದ ವಿ.ಆರ್.ಬಡಾವಣೆಯ ಮಹಿಳಾ ಪಿ.ಜಿ.ಯೊಳಗೆ ನುಗ್ಗಿ ಕೃತಿ ಕುಮಾರಿ (24) ಎಂಬ ಯುವತಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಪ್ರಕರಣ ಸಂಬಂಧ  ಪರಾರಿಯಾಗಿದ್ದ ಆರೋಪಿಯನ್ನು ಕೋರಮಂಗಲ ಠಾಣೆ ಪೊಲೀಸರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ಅಭಿಷೇಕ್ ಎಂದು ಗುರುತಿಸಲಾಗಿದೆ.

 ಪಿ.ಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡುತ್ತಿರುವ ದೃಶ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಆಧರಿಸಿ ಆರೋಪಿಯ ಗುರುತು ಪತ್ತೆ ಹಚ್ಚಿದ್ದ ಪೊಲೀಸರು, ಮಧ್ಯಪ್ರದೇಶದ ಅಭಿಷೇಕ್ ಎಂಬಾತನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News