×
Ad

‘ಟೋಯಿಂಗ್’ ವ್ಯವಸ್ಥೆ ಮರು ಜಾರಿ; ಹಗಲು ದರೋಡೆಗೆ ಮುಂದಾದ ಸರಕಾರ : ಬಿಜೆಪಿ ಟೀಕೆ

Update: 2025-05-26 22:31 IST

ಸಾಂದರ್ಭಿಕ ಚಿತ್ರ | PTI

ಬೆಂಗಳೂರು : ‘ರಾಜಧಾನಿ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿ, ರಸ್ತೆಗಳ ಅಭಿವೃದ್ಧಿ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡುವುದು ಬಿಟ್ಟು ಬಿಜೆಪಿ ಸರಕಾರ ತೆರವು ಮಾಡಿದ್ದ ಟೋಯಿಂಗ್ ವ್ಯವಸ್ಥೆಯನ್ನು ಕಾಂಗ್ರೆಸ್ ಸರಕಾರ ಜಾರಿಗೊಳಿಸಿ, ವಾಹನ ಸವಾರರಿಂದ ಹಗಲು ದರೋಡೆ ಮಾಡಲು ಮುಂದಾಗಿದೆ’ ಎಂದು ಬಿಜೆಪಿ ಟೀಕಿಸಿದೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ ಬೆಂಗಳೂರಿಗೆ ಗ್ರೇಟರ್, ಬ್ರ್ಯಾಂಡ್ ಬೆಂಗಳೂರು ಎಂದು ಮರುನಾಮಕರಣ ಮಾಡಿದ್ದು ಕೇವಲ ಲೂಟಿ ಮಾಡಲು ಮಾತ್ರ ಎನ್ನುವುದು ಇದೀಗ ಸ್ಪಷ್ಟವಾಗಿದೆ’ ಎಂದು ಟೀಕಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News