×
Ad

ಗ್ಯಾರಂಟಿಗಳನ್ನು ನಿಲ್ಲಿಸುವ ಕೆಲಸಕ್ಕೆ ಕಾಂಗ್ರೆಸ್ ಸರಕಾರ ಕೈ ಹಾಕಲಿದೆ : ಛಲವಾದಿ ನಾರಾಯಣಸ್ವಾಮಿ

Update: 2025-02-09 19:58 IST

ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ನಿಲ್ಲಿಸುವ ಕೆಲಸಕ್ಕೆ ಕೈ ಹಾಕಲಿದೆ ಎಂದು ನನಗೆ ಅನಿಸುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಹರಿಪ್ರಸಾದ್ ಅವರು ಗ್ಯಾರಂಟಿಗಳು ಸಾಕು; ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದಿದ್ದಾರೆ. ಇದನ್ನು ನೋಡಿದರೆ ಸರಕಾರ ಗ್ಯಾರಂಟಿಗಳಿಗೆ ಕೊಕ್ ಕೊಡುವ ಸಾಧ್ಯತೆಯಿದೆ ಎಂದರು.

ಸರಕಾರವು ಮೆಟ್ರೋ ದರವನ್ನೂ ಏರಿಸಿದೆ; ಹಾಲಿನ ದರ ಏರಿಕೆ, ಸ್ಟಾಂಪ್ ಡ್ಯೂಟಿ ಹೆಚ್ಚಳ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ದವಸ ಧಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಇಷ್ಟೆಲ್ಲ ಆದರೂ, ಯಾವುದಕ್ಕೆ ದರ ಏರಿಸಬೇಕು ಎಂಬುದರಲ್ಲಿ ಸರಕಾರ ಬ್ಯುಸಿ ಇದೆ. ಬೆಲೆ ಏರಿಕೆ ಮೂಲಕ ಜನರ ತಲೆ ಬೋಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಈ ಸರಕಾರ ಅದಾಗಲೇ ಹೆಚ್ಚು ಕಡಿಮೆ ಸ್ಮಶಾನ ಸೇರುವ ಪರಿಸ್ಥಿತಿ ಬಂದಿದೆ. ಈ ಸರಕಾರದ ಕೆಟ್ಟ ಹೆಸರು ಶೇ.99ಕ್ಕೆ ಹೋಗಿದೆ. ಇವರಿಗೆ ಒಳ್ಳೆಯ ಹೆಸರು ಬರುವುದಿಲ್ಲ. ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಸದನದಲ್ಲಿ ಏನೂ ಚರ್ಚೆ ಆಗದೇ ಇಷ್ಟಾನುಸಾರ ಮಾಡುವುದು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಕೂಡ. ಆದ್ದರಿಂದಲೇ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News