ಶಾಸಕರ ಮೇಲೆ ಹಲ್ಲೆ ಆರೋಪ | ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ

Update: 2026-07-23 18:22 IST

ಬೆಂಗಳೂರು : ಕೆಪಿಸಿಸಿ ಕಚೇರಿ ಮುಂದೆ ನಿನ್ನೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಗುರುವಾರ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಶಾಸಕರ ಮೇಲಿನ ಹಲ್ಲೆಯ ಸಂಬಂಧ ಜಾಮೀನುರಹಿತ ವಿವಿಧ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಬೇಕೆಂದು ಕೋರಿದರು.

ಶಾಸಕರ ಪ್ರಾಣಕ್ಕೆ ಭದ್ರತೆ ನೀಡಲು ವಿಫಲರಾದ ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿ, ಅಮಾನತು ಮಾಡಲು ಸೂಚಿಸಬೇಕು. ವಿಪಕ್ಷ ನಾಯಕರ ಭದ್ರತೆ ಹೆಚ್ಚಿಸಲು ಸೂಚನೆ ನೀಡಬೇಕು. ಕರ್ನಾಟಕದಲ್ಲಿ ಕುಸಿದಿರುವ ಕಾನೂನು-ಸುವ್ಯವಸ್ಥೆ, ಸಂವಿಧಾನಾತ್ಮಕ ಬಿಕ್ಕಟ್ಟಿನ ಬಗ್ಗೆ ರಾಷ್ಟ್ರಪತಿಗೆ ವಿಶೇಷ ವರದಿ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News