ಹೂಡಿಕೆ ಆಕರ್ಷಿಸಲು ಕಾಲಕಾಲಕ್ಕೆ ಕೈಗಾರಿಕಾ ನೀತಿ ಜಾರಿ : ಎಂ.ಬಿ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ, ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಸರಕಾರವು ಕಾಲಕಾಲಕ್ಕೆ ಕೈಗಾರಿಕಾ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನೊಳಗೊಂಡಂತೆ ರಾಜ್ಯದಲ್ಲಿ ಬಂಡವಾಳವನ್ನು ಆಕರ್ಷಿಸಲು ಹಲವು ಆದ್ಯತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
2025-30 ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಹೊರಗಡೆ ಗುರಿಯೊಂದಿಗೆ ಬೆಂಗಳೂರಿನಿಂದ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.
ಕೈಗಾರಿಕೆಯಲ್ಲಿ ಹಿಂದುಳಿದ ತಾಲೂಕುಗಳಲ್ಲಿ ಹೂಡಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ನೀತಿಯಲ್ಲಿ 3 ವಲಯಗಳಾಗಿ ರಾಜ್ಯದ ಜಿಲ್ಲೆಗಳನ್ನು ವರ್ಗೀಕರಿಸಿದೆ. ಕೈಗಾರಿಕೆಯಲ್ಲಿ ಹಿಂದುಳಿದ ತಾಲೂಕುಗಳು/ ಜಿಲ್ಲೆಗಳನ್ನು ವಲಯ-1 ಮತ್ತು ವಲಯ-2 ರಲ್ಲಿ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ವಲಯ-3ರಲ್ಲಿ ವರ್ಗೀಕರಿಸಲಾಗಿದೆ. ರಾಜ್ಯದ ಸಮತೋಲನ ಕೈಗಾರಿಕಾ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೈಗಾರಿಕೆಯಲ್ಲಿ ಹಿಂದುಳಿದ ಜಿಲ್ಲೆಗಳು, ತಾಲೂಕುಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಹೆಚ್ಚಿನ ಪ್ರೋ ತ್ಸಾಹವನ್ನು ನೀಡಲಾಗುತ್ತಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.