ಮೇಕೆದಾಟು ಅಣೆಕಟ್ಟು ಯೋಜನೆ: ಸಿಎಂ, ಜಲಸಂಪನ್ಮೂಲ ಸಚಿವರ ಸಭೆ

Update: 2026-08-18 22:46 IST

ಬೆಂಗಳೂರು, : ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಕುಡಿಯುವ ನೀರು ಮತ್ತು ವಿದ್ಯುತ್ ಯೋಜನೆಯನ್ನು ಅತ್ಯಂತ ವೇಗವಾಗಿ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜಲಸಂಪನ್ಮೂಲ ಸಚಿವ ಎನ್.ಚೆಲುವರಾಯಸ್ವಾಮಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅರಣ್ಯ ಇಲಾಖೆ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿ ಯೋಜನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಮುಂದಿನ ಹಂತಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ತೆರವುಗೊಳಿಸಬೇಕಾಗುವ ಮರಗಳಿಗೆ ನಿಯಮಾನುಸಾರ ಪರ್ಯಾಯವಾಗಿ ಕೈಗೊಳ್ಳಬೇಕಾದ ಕ್ರಮಗಳು, ಪರ್ಯಾಯ ಜಾಗದ ಹಂಚಿಕೆ ಹಾಗೂ ನಿಯಮಾವಳಿಗಳಂತೆ ಹೊಸದಾಗಿ ಸಸಿಗಳನ್ನು ನೆಟ್ಟು ಬೆಳೆಸುವ ಯೋಜನೆಗಳ ಬಗ್ಗೆ ಸಮಗ್ರವಾಗಿ ಸಮಾಲೋಚಿಸಲಾಯಿತು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News