×
Ad

ರಾಜ್ಯ ಕಾನೂನು ವಿವಿಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ನಾಮನಿರ್ದೇಶನ

Update: 2024-05-25 21:28 IST

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ನ ಸದಸ್ಯರನ್ನಾಗಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೂಡ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.

ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿನಿಯಮ 2009ರ ಸೆಕ್ಷನ್ 33 (1) (ಎಲ್) ರಂತೆ ಮಾರ್ಚ್ 14ರಿಂದ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಅಭಿನಂದನೆ: ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಿದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದಿನೇಶ್ ಗೂಳಿಗೌಡ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News