×
Ad

ಐದು ಲೇಔಟ್‌ಗಳ ನಿರ್ಮಾಣ ಮಾಡುವ ಗುರಿ : ಸಚಿವ ಝಮೀರ್ ಅಹಮದ್

Update: 2024-07-24 22:31 IST

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 5 ಲೇಔಟ್‌ಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ವಸತಿ ಸಚಿವ ಬಿ.ಝಡ್.ಝಮೀರ್ ಅಹಮದ್‌ ಖಾನ್ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ರಾಜ್ಯದ ಒಟ್ಟು 5 ಕಡೆ ಸುವ್ಯವಸ್ಥಿತ ಹಾಗೂ ಸುಸಜ್ಜಿತ ಲೇಔಟ್‌ಗಳನ್ನು ನಿರ್ಮಾಣ ಮಾಡುವ ಯೋಜನೆಯಿದೆ. ಆದರೆ, ಯಾವ ಸ್ಥಳದಲ್ಲಿ ಮಾಡುತ್ತೇವೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಏಕೆಂದರೆ ರೈತರು ಇದಕ್ಕೆ ಜಮೀನು ಕೊಡಲು ಹಿಂದೆಮುಂದೆ ನೋಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಒಂದು ಲೇಔಟ್ ನಿರ್ಮಿಸಬೇಕೆಂದರೆ ಕನಿಷ್ಠ 1ಸಾವಿರ ಎಕರೆ ಜಮೀನು ಬೇಕಾಗುತ್ತದೆ. ನಾವು ರೈತರಿಂದ ಬಲವಂತವಾಗಿ ಜಮೀನು ಭೂಸ್ವಾದೀನಪಡಿಸಿಕೊಳ್ಳಲು ಆಗುವುದಿಲ್ಲ. ಅವರ ಮನವೊಲಿಸಬೇಕಾಗುತ್ತದೆ ಎಂದು ಝಮೀರ್ ಅಹಮದ್‌ ಖಾನ್ ತಿಳಿಸಿದರು.

ಒಂದು ಲೇಔಟ್‌ನಲ್ಲಿ ಪಾರ್ಕಿಂಗ್, ಸ್ಟೇಡಿಯಂ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳೂ ಇರಬೇಕು. ಈಗಾಗಲೇ ಆನೇಕಲ್‌ನಲ್ಲಿ ಸುಮಾರು ಒಂದು ಸಾವಿರ ಎಕರೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿರುವ ಲೇಔಟ್ ನಿರ್ಮಾಣ ಮಾಡಿ ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದು ಝಮೀರ್ ಅಹಮದ್‌ ಖಾನ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಹಿಂದಿನ ಸರಕಾರ 71 ಎಕರೆಯಲ್ಲಿ ಲೇಔಟ್ ನಿರ್ಮಾಣ ಮಾಡಲು ಮುಂದಾಗಿತ್ತು. ಇಷ್ಟು ಸಣ್ಣ ಪ್ರಮಾಣದಲ್ಲಿ ಸಾಧ್ಯವಿಲ್ಲದ ಕಾರಣ ನೆನೆಗುದಿಗೆ ಬಿದ್ದಿದೆ ಎಂದು ಝಮೀರ್ ಅಹಮದ್‌ಖಾನ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News