ʼಆಪರೇಷನ್ ಸಿಂಧೂರʼ ನಮ್ಮ ಸೇನೆ-ನಮ್ಮ ಹೆಮ್ಮೆ: ಝಮೀರ್ ಅಹ್ಮದ್
Update: 2025-05-07 16:13 IST
ಬೆಂಗಳೂರು: ಪೆಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ʼಆಪರೇಷನ್ ಸಿಂಧೂರ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ. ನಮ್ಮ ಸೇನೆ-ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರಕಾರದ ಜತೆ ಇದ್ದೇವೆ ಎಂದು ತಿಳಿಸಿದ್ದಾರೆ.