ಕೈಗಾ, ಕೆಆರ್ಎಸ್ಗೆ ಮತ್ತಷ್ಟು ಭದ್ರತೆ : ಡಾ.ಜಿ.ಪರಮೇಶ್ವರ್
Update: 2025-05-08 20:06 IST
ಬೆಂಗಳೂರು: ರಾಯಚೂರು, ಕೈಗಾ, ಕೆಆರ್ಎಸ್ಗೆ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಇಲ್ಲಿನ ಸದಾಶಿವನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರತೆಗೆ ವಿಶೇಷ ಪಡೆ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ರಾಯಚೂರು, ಕೈಗಾ, ಕೆ.ಆರ್.ಎಸ್ಗೆ ಭದ್ರತೆ ಹೆಚ್ಚಿಸಲಾಗಿದೆ ಎಂದರು.
ನಿನ್ನೆ ಮಾಕ್ ಡ್ರಿಲ್ ಸಂಬಂಧ ಕೇಂದ್ರದಿಂದ ಸೂಚನೆ ಬಂದಿತ್ತು. ಮೂರು ಜಿಲ್ಲೆಯಲ್ಲಿ ಮಾಡುವಂತೆ ಸೂಚನೆ ಬಂದಿತ್ತು. ಹೆಚ್ಚುವರಿಯಾಗಿ ಮೈಸೂರು ಆಯ್ಕೆ ಮಾಡಿಕೊಂಡಿದ್ದೇವೆ. ಎಲ್ಲ ಜಿಲ್ಲೆಗಳಿಗೆ ಕಟ್ಟುನಿಟ್ಟಾಗಿ ತಿಳಿಸಿದ್ದೇವೆ. ಎಸ್ಪಿಗಳಿಗೆ ಭದ್ರತೆ ಬಗ್ಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.