‘ಗಡಿ ಮತ್ತು ನದಿ ವಿವಾದಗಳ ಬಗ್ಗೆ ನಿಗಾ’ ಸಚಿವ ಎಚ್.ಕೆ.ಪಾಟೀಲ್ ನೇಮಕ
Update: 2025-06-30 22:43 IST
ಎಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ವಿಷಯದ ಬಗ್ಗೆ ನಿರಂತರವಾಗಿ ಪರಿವೀಕ್ಷಿಸಲು ಕಾನೂನು, ನ್ಯಾಯ ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇದವರೆಗೆ ನೇಮಿಸಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.