×
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ | ಕಸ್ಟಡಿಯಲ್ಲಿದ್ದ ಪವಿತ್ರಾಗೌಡಗೆ ಮೇಕಪ್ ಮಾಡಿಕೊಳ್ಳಲು ಅನುಮತಿ: ಪಿಎಸ್‌ಐಗೆ ನೋಟಿಸ್ ಜಾರಿ

Update: 2024-06-26 18:58 IST

ರೇಣುಕಾಸ್ವಾಮಿ/ಪವಿತ್ರಾ ಗೌಡ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪವಿತ್ರಾಗೌಡಗೆ ಪೊಲೀಸ್ ಕಸ್ಟಡಿ ವೇಳೆ ಮೇಕಪ್ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಿದ ಮಹಿಳಾ ಸಬ್‍ಇನ್‍ಸ್ಪೆಕ್ಟರ್‌(ಪಿಎಸ್‌ಐ)ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿರುವುದಾಗಿ ವರದಿಯಾಗಿದೆ.

ಜೂ.15ರಂದು ಪವಿತ್ರಾ ಗೌಡ ಅವರನ್ನು ಸ್ಥಳ ಮಹಜರು ನಡೆಸಲು ಪೊಲೀಸ್ ಅಧಿಕಾರಿಗಳು ರಾಜರಾಜೇಶ್ವರಿನಗರದ ಆಕೆಯ ಮನೆಗೆ ಕರೆದೊಯ್ದಿದ್ದರು.

ಮನೆಗೆ ಕರೆದೊಯ್ದ ವೇಳೆ ಪವಿತ್ರಾಗೌಡ ಮನೆಯಿಂದ ವಾಪಸ್ಸಾಗಬೇಕಾದರೆ ಲಿಪ್ ಸ್ಟಿಕ್ ಹಾಗೂ ಮೇಕಪ್ ಮಾಡಿಕೊಂಡು ನಗುತ್ತಾ ಹೊರಬರುತ್ತಿದ್ದದ್ದು ವಿಡಿಯೋದಲ್ಲಿ ಸೆರೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಪವಿತ್ರಾಗೌಡಗೆ ಮೇಕಪ್ ಮಾಡಿಕೊಳ್ಳಲು ಅನುಮತಿ ನೀಡಿದ್ದರ ಕುರಿತು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಯಿಂದ ಸಬ್‍ಇನ್‍ಸ್ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸ್ಪಷ್ಟನೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News