×
Ad

ಕೃಷ್ಣಾ ನ್ಯಾಯಾಧೀಕರಣ : ಗೆಜೆಟ್ ಅಧಿಸೂಚನೆ ಹೊರಡಿಸಲು ಒತ್ತಾಯ : ಸಿದ್ದರಾಮಯ್ಯ

Update: 2025-05-03 19:48 IST

ಬೆಂಗಳೂರು : ಕೇಂದ್ರದ ಜಲಶಕ್ತಿ ಸಚಿವರು ಮೇ 7ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2010ರಲ್ಲಿ ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2 ತೀರ್ಪು ನೀಡಿದ ನಂತರ 2013 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ತದನಂತರ ಈವರೆಗೆ ಕೇಂದ್ರ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ ಎಂದರು.

ಎರಡನೆ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಸಭೆಯಲ್ಲಿಯೂ ಈ ಬಗ್ಗೆ ಒತ್ತಾಯಿಸಲಾಗುವುದು ಎಂದು ನುಡಿದರು.

ತೆಲಂಗಾಣ ಮತ್ತು ಆಂಧ್ರ ಪ್ರದೇಶ ಕೂಡ ಅರ್ಜಿ ಹಾಕಿಕೊಂಡಿದೆ. ಅವರು ತಮ್ಮ ಪಾಲಿಗೆ ಹಂಚಿಕೆಯಾಗಿರುವದನ್ನು ಬಳಸಿಕೊಳ್ಳಲಿ. ಈ ಬಗ್ಗೆ ನಾವು ಒತ್ತಾಯ ಮಾಡಿದ್ದು, ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಆದೇಶ ಹೊರಡಿಸದ ಕಾರಣ 524 ಮೀಟರ್‍ಗಳಿಗೆ ಹೆಚ್ಚಿಸುವ ಕೆಲಸವನ್ನು ಮಾಡುತ್ತೇವೆ ಎಂದು ಸಿಎಂ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News