×
Ad

ಚೋರ್ಲಾಘಾಟ್‌ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣ | ಅಧಿಕೃತ ದೂರು ದಾಖಲಾಗಿಲ್ಲ : ಜಿಲ್ಲಾ ವರಿಷ್ಠಾಧಿಕಾರಿ ಸ್ಪಷ್ಟನೆ

Update: 2026-02-03 23:50 IST

ಬೆಳಗಾವಿ : ಜಿಲ್ಲೆಯ ಚೋರ್ಲಾಘಾಟ್‌ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಈಗಾಗಲೇ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಂಗಳವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಬಾಯಿ ಮಾತಿನಲ್ಲಿ ಹೇಳಿದ ಹೇಳಿಕೆಗಳೆಲ್ಲವೂ ನಿಜ ಎಂದು ನಂಬಲಾಗುವುದಿಲ್ಲ. ಸಂಬಂಧಿಸಿದ ವ್ಯಕ್ತಿ ಬಂದು ದೂರು ನೀಡಿದರೆ ಮಾತ್ರ ಪರಿಶೀಲನೆ ನಡೆಸಲಾಗುವುದು ಎಂದರು.

ಅವರು ಹೊರಹರಟಿಯಲ್ಲಿ ತಿಳಿಸಿದಂತೆ, ಘಟನೆಯನ್ನು ನೋಡಿದ್ದೇವೆ ಎಂದು ಹೇಳುವವರು ಬಂದು ದೂರು ನೀಡಬೇಕು. ಇತರರ ಬಾಯಿಯಿಂದ ಕೇಳಿ ತನಿಖೆ ನಡೆಸಲು ಸಾಧ್ಯವಿಲ್ಲ. ಯಾವುದೇ ಪ್ರಾಥಮಿಕ ಪರಿಶೀಲನೆ ದೂರು ಬಂದ ಮೇಲೆ ಮಾತ್ರ ಸಾಧ್ಯ ಎಂದು ವಿವರಿಸಿದರು.

ಮಹಾರಾಷ್ಟ್ರ ಸರಕಾರದ ವಿಶೇಷ ತನಿಖಾ ತಂಡ ರಚನೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ಏಕೆ ವಿಶೇಷ ತನಿಖಾ ತಂಡ ರಚಿಸಿದೆ ಎಂಬುದಕ್ಕೆ ಮಹಾರಾಷ್ಟ್ರ ಸರಕಾರವೇ ವಿವರಣೆ ನೀಡಬೇಕು. ಈವರೆಗೆ ನಮ್ಮ ಅಧಿಕಾರಿಗಳು ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಹಣದ ಬಗ್ಗೆ ಮಹಾರಾಷ್ಟ್ರದ ಅಧಿಕಾರಿಗಳು ನೀಡಿದ ಮಾಹಿತಿ ಅಪೂರ್ಣವಾಗಿದೆ. ಹೆಚ್ಚಿನ ಮಾಹಿತಿ ಬೇಕಾದಷ್ಟರಷ್ಟೇ ನಾವು ಉತ್ತರಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News