×
Ad

ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

Update: 2025-12-10 11:47 IST

ಬೆಳಗಾವಿ: ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ಕಾರ್ಯಕರ್ತರು ಬುಧವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಕ್ಯಾಬಿನೆಟ್ ಸಭೆಯಲ್ಲಿ 2020ರ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸೆಕ್ಷನ್ 6(4)ಕ್ಕೆ ತಿದ್ದುಪಡಿಗೆ ನಿರ್ಧಾರ ಕೈಗೊಂಡಿದ್ದರೂ, ಈಗ ಸರಕಾರ ಅದನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ಒಂದೇ ವಾಹನದಲ್ಲಿ ನಿಗದಿತ ಮಿತಿಗಿಂತ ಹಲವು ಪಟ್ಟು ಹೆಚ್ಚು ಜಾನುವಾರುಗಳನ್ನು ತುಂಬಿ ಕ್ರೂರವಾಗಿ ಸಾಗಿಸುವ ಘಟನೆಗಳು ನಡೆಯುತ್ತಿದ್ದರೂ, 2021ರಿಂದ ಜಾರಿಯಾದ ಕಾಯ್ದೆಯ ಪರಿಣಾಮವಾಗಿ ಇದರಲ್ಲಿ ಸ್ವಲ್ಪ ನಿಯಂತ್ರಣ ಕಂಡಿತ್ತು. ಆದರೆ ಕಾಯ್ದೆಯ ಸಂಪೂರ್ಣ ಜಾರಿಗೆ ಬಾರದಿರುವ ಹಿನ್ನೆಲೆಯಲ್ಲಿ, ಇನ್ನೂ ಕೆಲವು ಪ್ರದೇಶಗಳಲ್ಲಿ ಹಣದ ಆಸೆಗೆ ಜಾನುವಾರುಗಳನ್ನು ಅಮಾನ್ಯ ರೀತಿಯಲ್ಲಿ ಸಾಗಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು .

ಪ್ರತಿಭಟನೆಯಲ್ಲಿ ಪ್ರಮೋದ್ ಒಕ್ಕುಂದಮಠ, ಸ್ವರೂಪ ಕಾಲಕುಂದ್ರಿ, ಆನಂದ ಕರಲಿಂಗನ್ನವರ, ನಾಗೇಶ ಕಾಂಬಳೆ ಸೇರಿದಂತೆ ಹುದ್ದೆದಾರರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News