×
Ad

ಬೆಳಗಾವಿ | ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ : ಆರೋಪಿ ಕಾಲಿಗೆ ಗುಂಡೇಟು

Update: 2025-08-30 08:57 IST

ಬೆಳಗಾವಿ : ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಶನಿವಾರ ನಸುಕಿನ ಜಾವ 6 ಗಂಟೆಗೆ ನಡೆದಿದೆ.

ಆರೋಪಿ ರಮೇಶ್ ಕಿಲ್ಲಾರ್ ಕಾಲಿಗೆ ಪೊಲೀಸರ ಗುಂಡು‌ ಹಾರಿಸಿದ್ದಾರೆ. ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸೇರಿ ಹಲವು ಪ್ರಕರಣದಲ್ಲಿ ಆರೋಪಿ ಆಗಿರುವ ರಮೇಶ್ ಕಿಲ್ಲಾರ್ ನನ್ನು ಪೊಲೀಸರು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಪೊಲೀಸ್ ಪೇದೆ ಷರೀಫ್ ದಫೇದಾರ್ ಗೆ ಚಾಕು ಇರಿದು ಪರಾರಿಯಾಗಲು ಮುಂದಾಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಅವರು ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಆರೋಪಿಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News