×
Ad

ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಸ್ಥಳಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Update: 2024-08-08 17:18 IST

ಟೇಪ್ ತಯಾರಿಕಾ ಕಾರ್ಖಾನೆ

ಬೆಂಗಳೂರು : ಇಲ್ಲಿನ ನಾವಗೆ ಗ್ರಾಮದ ಸ್ನೇಹಂ ಅಂತಾರಾಷ್ಟ್ರೀಯ ಇನ್ಸೂಲಿನ್ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು.

ಭೀಕರ ಅಗ್ನಿ ದುರಂತರದಲ್ಲಿ ಕಾರ್ಮಿಕ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ (20) ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮೂವರು ಕಾರ್ಮಿಕರಿಗೆ ಚಿಕಿತ್ಸೆ ಮುಂದುವರಿದಿದೆ.

ಯಾವ ರೀತಿಯ ಇನ್ಸುಲಿನ್ ಟೇಪ್ ತಯಾರಿಸುತ್ತಿದ್ದರು ಎಂಬುದನ್ನು ಪರಿಶೀಲಿಸಿ, ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡವರ ಬಗ್ಗೆಯೂ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ಪಡೆದರು. ಮೃತ ಕಾರ್ಮಿಕ ಯಲ್ಲಪ್ಪ ಗುಂಡ್ಯಾಗೋಳ (20) ಅವರ ಕುಟುಂಬಕ್ಕೆ ಹಾಗೂ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡವರಿಗೂ ಸರಕಾರದಿಂದ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಅವರಿಗೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News