×
Ad

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ

Update: 2024-11-05 12:54 IST

ಬೆಳಗಾವಿ: ಬೆಳಗಾವಿ ತಾಲೂಕು ತಹಶೀಲ್ದಾರ್ ಕಚೇರಿಯ ಸಿಬ್ಬಂದಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಸಿ ಆಗಿದ್ದ ರುದ್ರೇಶ ಯಾದಣ್ಣವರ ಮೃತಪಟ್ಟವರು.

ಸೋಮವಾರ ರಾತ್ರಿ ಕಚೇರಿಯೊಳಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಆಗಮಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ.

‘ಮೇಲಧಿಕಾರಿಗಳ ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆರೋಪಿಸಿ ತಮ್ಮ ಮೊಬೈಲ್ನಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News