×
Ad

ಕುಂಭ ಮೇಳಕ್ಕೆ ತೆರಳುತ್ತಿದ್ದ ವಾಹನ ಅಪಘಾತ: ಗೋಕಾಕ್ ನ ಆರು ಮಂದಿ ಮೃತ್ಯು

Update: 2025-02-24 10:03 IST

ಬೆಳಗಾವಿ, ಫೆ.24: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಗೋಕಾಕ್ ನಿಂದ ತೆರಳುತ್ತಿದ್ದ ವಾಹನವೊಂದು ಸೋಮವಾರ ಮುಂಜಾನೆ ಮಧ್ಯ ಪ್ರದೇಶ ರಾಜ್ಯದಲ್ಲಿ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ(50), ಸುನೀಲ್ ಶೇಡಶ್ಯಾಳೆ(45), ಬಸವರಾಜ ಕುರ್ತಿ(63), ಬಸವರಾಜ ದೊಡಮಾಳ(49), ಈರಣ್ಣ ಶೇಬಿನಕಟ್ಟಿ(27) ಹಾಗೂ ವಿರೂಪಾಕ್ಷ ಗುಮತಿ(61) ಮೃತಪಟ್ಟವರು ಎಂದು ತಿಳಿದುಬಂದಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತೂಫಾನ್ ವಾಹನದಲ್ಲಿ ಇವರು ಗೋಕಾಕ್ ನಿಂದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುತ್ತಿದ್ದರು. ಅವರಿದ್ದ ವಾಹನ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News