×
Ad

ಬಳ್ಳಾರಿ | ಶಾದಿ ಮಹಲ್‌ಗೆ ಅನುದಾನದ ಭರವಸೆ ನೀಡಿದ ಶಾಸಕ ಬಿ.ಎಂ.ನಾಗರಾಜ್‌

Update: 2026-06-27 20:13 IST

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ 3ನೇ ವಾರ್ಡಿನ ಜಾಮಿಯಾ ಮಸೀದಿ ಹಿಂಭಾಗದ ಬಾವಿಮನೆ ಓಣಿಯಲ್ಲಿ ಚರಂಡಿ ಹಾಗೂ ಇಂಟರ್‌ಲಾಕ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸ್ಥಳೀಯರು ವಿವಿಧ ನಾಗರಿಕ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. 3 ಹಾಗೂ 4ನೇ ವಾರ್ಡಿನ ಮಹಿಳೆಯರು ದುರ್ವಾಸನೆ ಬೀರುತ್ತಿರುವ ಸಾರ್ವಜನಿಕ ಶೌಚಾಲಯವನ್ನು ತೆರವುಗೊಳಿಸಿ, ಅದರ ಜಾಗದಲ್ಲಿ ಅಂಗನವಾಡಿ ಕೇಂದ್ರ ಅಥವಾ ಸುಸಜ್ಜಿತ ಶೌಚಾಲಯ ನಿರ್ಮಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

ಇದೇ ವೇಳೆ ಜಾಮಿಯಾ ಮಸೀದಿ ಮುತವಲ್ಲಿ ಖಾದರ್ ವಲಿ ಹಾಗೂ ಮಸೀದಿ ಸಮಿತಿ ಸದಸ್ಯರು ಪಟ್ಟಣದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಶಾಸಕ ಬಿ.ಎಂ. ನಾಗರಾಜ, ಬಳಕೆಯಾಗದ ಸಾರ್ವಜನಿಕ ಶೌಚಾಲಯವನ್ನು ನೆಲಸಮಗೊಳಿಸಿ, ಸ್ಥಳೀಯರು ಸೂಚಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾದಿ ಮಹಲ್ ನಿರ್ಮಾಣಕ್ಕೆ ಮುಸ್ಲಿಂ ಹಾಗೂ ಪಿಂಜಾರ್ ಸಮುದಾಯಗಳಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಕ್ಫ್ ಮಂಡಳಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಪಡೆಯಲಾಗುವುದು. ವರದಿ ಬಂದ ಬಳಿಕ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಬಾಲಪ್ಪ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಆನಂದ, ದೇವರ ಮನೆ ನಾಗಪ್ಪ, ಖಾದರ್ ವಲಿ, ದೊಡ್ಡ ಪರಮೇಶ, ನಸರುದ್ದೀನ್, ರಂಜಾನ್ ಸಲಫಿ, ಮಿಂತಿ ಮಹಮ್ಮದ್, ಜಾಮಿಯಾ ಮಸೀದಿ ಕಮಿಟಿ ಕಾರ್ಯದರ್ಶಿ ಖಾಜಾ ಮೊಹಿದ್ದೀನ್, ಸದಸ್ಯರಾದ ಅಬ್ದುಲ್ ಖಾದರ್ ಜಿಲಾನಿ, ಸುಬಾನ್, ಅನಿಫ್, ಹಸೇನ್, ಖಾಸಿಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News