ಬಳ್ಳಾರಿ| ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಸಂಡೂರು : ಯುವ ಕಾಂಗ್ರೆಸ್ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್ ಎನ್ ಕೆ ಎಸ್ ಹಾಗೂ ಸಂಡೂರು ಬ್ಲಾಕ್ ಅಧ್ಯಕ್ಷರಾದ ರುದ್ರ ಗೌಡ ಅವರ ನೇತೃತ್ವದಲ್ಲಿ, ಕ್ಷೇತ್ರದ ಶಾಸಕಿಯಾದ ಅನ್ನಪೂರ್ಣ ಈ ತುಕಾರಾಂ ಅವರ ಸಮ್ಮುಖದಲ್ಲಿ ಕೃಷ್ಣನಗರ ಮತ್ತು ತಾರಾನಗರದ ಕೆಲ ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಂಡೂರಿನ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾಸಕಿಯಾದ ಅನ್ನಪೂರ್ಣ ಈ ತುಕಾರಾಂ ಅವರು ಕಾಂಗ್ರೆಸ್ ಪಕ್ಷದ ಶಾಲನ್ನು ಹೊದಿಸಿ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಅನ್ನಪೂರ್ಣ ಈ ತುಕಾರಾಂ, ಕಾಂಗ್ರೆಸ್ ಪಕ್ಷವು ಯುವಕರ ಆಶಯಗಳಿಗೆ ಸದಾ ಸ್ಪಂದಿಸುವ ಪಕ್ಷವಾಗಿದ್ದು, ಸಮಾಜಮುಖಿ ಕಾರ್ಯಗಳ ಮೂಲಕ ಜನರ ವಿಶ್ವಾಸವನ್ನು ಗಳಿಸಿದೆ ಎಂದು ಹೇಳಿದರು.
ಯುವಕರ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು ಉಪಸ್ಥಿತರಿದ್ದರು.