×
Ad

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ; ಪೇಜಾವರ ಸ್ವಾಮಿ, ರವಿಶಂಕರ್ ಗುರೂಜಿಗೆ ಆಹ್ವಾನ: ಪೋಸ್ಟರ್ ವೈರಲ್

Update: 2026-06-02 16:28 IST

ಬೆಂಗಳೂರು : ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಅವರು ಜೂ.3ರ ಬುಧವಾರ ಸಂಜೆ 4:05 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥಸ್ವಾಮಿ, ಆರ್ಟ್ ಆಫ್ ಲಿವಿಂಗ್ ಆಶ್ರಮದ ರವಿಶಂಕರ್ ಗುರೂಜಿ ಸಹಿತ ಧರ್ಮ ಗುರುಗಳಿಗೆ ಆಹ್ವಾನ ನೀಡಲಾಗುತ್ತಿದೆ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೂ.3ರಂದು ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆ ಆಹ್ವಾನ ಪಟ್ಟಿಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ನಾಥ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥಸ್ವಾಮಿ, ಆರ್ಟ್ ಆಫ್ ಲಿವಿಂಗ್ ಆಶ್ರಮದ ಶ್ರೀ ರವಿಶಂಕರ್ ಗುರೂಜಿ ಸಹಿತ 55 ಸ್ವಾಮೀಜಿಗಳು ಹಾಗೂ ಮುಸ್ಲಿಮ್, ಕ್ರೈಸ್ತ ಧರ್ಮದ ಗುರುಗಳಿಗೂ ಆಹ್ವಾನ ನೀಡಲಾಗುತ್ತಿದೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖಿಸಲಾಗಿದೆ.

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ನೂತನ ಸಚಿವರಿಗೆ ಲೋಕಭವನ(ರಾಜಭವನ)ದ ಗಾಜಿನಮನೆಯಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೆರೆ ರಾಜ್ಯಗಳ ಸಿಎಂಗಳು ಸಹಿತ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News