×
Ad

ಬೀದರ್‌ನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

Update: 2025-06-06 17:18 IST

ಮಹೇಶ್ ಬಡದಾಳೆ 

ಬೀದರ್ : ಬಸವಕಲ್ಯಾಣ ತಾಲ್ಲೂಕಿನ ಕಲಖೋರಾ ಗ್ರಾಮದ ಯುವಕನೊರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಮೃತರನ್ನು ಮಹೇಶ್ ಬಡದಾಳೆ (30) ಎಂದು ಗುರುತಿಸಲಾಗಿದೆ.

ಮಹೇಶ್ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆತ ಕುಡಿತದ ಚಟಕ್ಕೆ ಒಳಗಾಗಿದ್ದು, ಸಾಲ ಕೂಡ ಮಾಡಿಕೊಂಡಿದ್ದ. ಇದರಿಂದಾಗಿ ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮೃತದೇಹವು ಬೆಂಗಳೂರಿನಿಂದ ಆತನ ಸ್ವಂತ ಗ್ರಾಮವಾದ ಕಲಖೋರಾಗೆ ತರಲಾಗಿದ್ದು, ಮುಡಬಿ ಠಾಣೆಯ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುಡಿಆರ್ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News