×
Ad

ಔರಾದ್ | ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Update: 2026-05-22 19:56 IST

ಔರಾದ್: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದ್ದು, ಹಳೆ ಬಡಾವಣೆ ಸೇರಿದಂತೆ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಶುಕ್ರವಾರ ಪೌರಾಡಳಿತ ಯೋಜನಾ ನಿರ್ದೇಶಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಪಟ್ಟಣದ ಬಹುತೇಕ ವಾರ್ಡ್‌ಗಳ ರಸ್ತೆಗಳು ಹದಗೆಟ್ಟಿದ್ದು, ಚರಂಡಿಗಳಲ್ಲಿನ ಕಸವನ್ನು ಹಲವು ದಿನಗಳಿಂದ ತೆರವುಗೊಳಿಸದ ಕಾರಣ ಮಳೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ದೂರಲಾಗಿದೆ.

ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗಿದ್ದು, ಕೆಲವು ವಾರ್ಡ್‌ಗಳಲ್ಲಿ ಕೊಳವೆಬಾವಿ ಕೊರೆದಿದ್ದರೂ ಮೋಟಾರ್ ಅಳವಡಿಸದ ಕಾರಣ ಜನರು ನೀರಿಗಾಗಿ ಪರದಾಡುವಂತಾಗಿದೆ ಎಂದು ಆರೋಪಿಸಲಾಗಿದೆ.

ರಾತ್ರಿ ವೇಳೆ ಮುಖ್ಯ ಬೀದಿಗಳಲ್ಲಿ ಬೀದಿದೀಪಗಳಿಲ್ಲದೆ ಸಾರ್ವಜನಿಕರು ಕತ್ತಲಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ.

ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ 15 ದಿನಗಳಲ್ಲಿ ಪುರಸಭೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲ್ಲೂಕಾಧ್ಯಕ್ಷ ಆನಂದ್ ದ್ಯಾಡೆ, ಬಸವರಾಜ್ ಹಳ್ಳೆ, ಬಾಲಾಜಿ ದಾಮ, ಚನ್ನಬಸವ ಗಜರೆ, ಶ್ರೀಕಾಂತ್ ಚಿದ್ರೆ, ಸಾಗರ್ ಚಿದ್ರೆ, ನಾಗರಾಜ್ ಮಳ್ಳೆ, ಅಂಬದಾಸ್ ನೆಳಗೆ, ನಾಗರಾಜ್ ಭಾಲ್ಕೆ ಹಾಗೂ ಸುಭಾಸ್ ಒಡಿಯಾರ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News