Bidar | ಶ್ರಮ, ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಉಜ್ವಲ ಭವಿಷ್ಯ ಸಾಧ್ಯ: ಬಸವರಾಜ್ ತೊಂಡಾರೆ

Update: 2026-08-22 19:20 IST

ಬೀದರ್: ಶಿಕ್ಷಣವು ಜ್ಞಾನ ಪರಂಪರೆಯ ದಾರಿಯಾಗಿದ್ದು, ಕೌಶಲ್ಯ ಮತ್ತು ವಿವೇಕವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಶ್ರಮ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಬಿಡಿಪಿಸಿ ನಿರ್ದೇಶಕ ಬಸವರಾಜ್ ತೊಂಡಾರೆ ಹೇಳಿದರು.

ಬಸವಕಲ್ಯಾಣ ನಗರದ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ 2026–27ನೇ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರ ಪಡೆಯುವುದಕ್ಕೆ ಸೀಮಿತವಾಗದೆ ಜ್ಞಾನ, ಸೃಜನಶೀಲತೆ ಮತ್ತು ಕೌಶಲ್ಯಗಳ ಮೂಲಕ ಸಮಾಜ ಹಾಗೂ ಜಗತ್ತನ್ನು ರೂಪಿಸುವತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತದೆ. ಆದರೆ ಅವುಗಳನ್ನು ಶೈಕ್ಷಣಿಕ ಬೆಳವಣಿಗೆಗೆ ಬಳಸಿಕೊಂಡು ಸರ್ವತೋಮುಖ ಅಭಿವೃದ್ಧಿ ಸಾಧಿಸುವ ಜವಾಬ್ದಾರಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿಗಳ ಸಾಧನೆಯೇ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಮಾನದಂಡವಾಗುತ್ತದೆ ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಭೀಮಾಶಂಕರ್ ಬಿರಾದಾರ್ ಮಾತನಾಡಿ, ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಬಹುಶಿಸ್ತೀಯ ಹಾಗೂ ಅಂತರ್ಶಿಸ್ತೀಯ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿವಿಧ ವಿಷಯಗಳ ಸಂಶೋಧನಾ ಪ್ರಬಂಧಗಳು ಮತ್ತು ಲೇಖನಗಳ ಅಧ್ಯಯನದ ಮೂಲಕ ಜ್ಞಾನ ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೂ ವಿದ್ಯಾರ್ಥಿಗಳು ಮಹತ್ವ ನೀಡಬೇಕು. ಗುಣಮಟ್ಟದ ಅಧ್ಯಯನ, ಸಂಶೋಧನೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಪಿಸಿ ನಿರ್ದೇಶಕ ಭದ್ರಿನಾಥ್ ಪಾಟೀಲ್, ಬಿಡಿವಿಸಿ ಕೋಶಾಧ್ಯಕ್ಷ ಶಿವರಾಜ್ ಶಾಶೆಟ್ಟೆ, ಬಸವೇಶ್ವರ್ ಪಿಜಿ ಪ್ರಾಚಾರ್ಯೆ ಶಾಂತಲಾ ಪಾಟೀಲ್, ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯೆ ಮಾಯಾ ಮುರಾಳೆ, ಡಾ. ಬಸವರಾಜ್ ಖಂಡಾಳೆ, ವಿವೇಕಾನಂದ್ ಶಿಂದೆ, ಸುಜಾವುದ್ದೀನ್, ರೋಷನ್ ಬಿ, ಸಂಗೀತಾ ಮಹಾಗಾವೆ, ಪ್ರಿಯಾ ಚೌಹಾಣ್, ನಾಗವೇಣಿ ಬಿರಾದಾರ್, ಶೀತಲ್ ರೆಡ್ಡಿ, ಸಚಿನ್ ಬಿಡುವೆ, ಚನ್ನಬಸಪ್ಪ ಹೆಚ್ಎಸ್, ಪ್ರವೀಣ್ ಬಿರಾದರ್, ನಾಗರಾಜ್ ನಾಸೆ, ಪ್ರಶಾಂತ್ ಬುಡಗೆ, ಸುಮಾ ಕುಂಟನೂರ್, ಐಶ್ವರ್ಯ ಖರೋಣೆ, ವೀರೇಶ್ ಸ್ವಾಮಿ ಹಾಗೂ ಗಣೇಶ್ ಮೇತ್ರಿ ಸೇರಿದಂತೆ ಇತರರು ಇದ್ದರು. ಗಂಗಾಧರ ಸಾಲಿಮಠ್ ನಿರೂಪಿಸಿ, ಸ್ವಾಗತಿಸಿದರು. ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News