×
Ad

ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2025-01-28 19:18 IST

ಕಾರ್ತಿಕ್

ಬೀದರ್ : ಸಾಲಬಾಧೆ ತಾಳಲಾರದೆ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಇಂದು ನಡೆದಿದೆ.

ಖಾನಾಪುರ ಗ್ರಾಮದ ಕಾರ್ತಿಕ್ (21) ಮೃತ ರೈತ ಎಂದು ಗುರುತಿಸಲಾಗಿದೆ..

ಕಾರ್ತಿಕ್ ಸಾಲ ಮಾಡಿ ಹೊಲ ಉಳುಮೆ ಮಾಡುತ್ತಿದ್ದ. ಹೊಲದಲ್ಲಿ ಚೆನ್ನಾಗಿ ಬೆಳೆ ಬೆಳೆಯದ ಕಾರಣ ಸಾಲ ತೀರಿಸಲಾಗದೆ ಬೇಸತ್ತು ಖಾನಾಪುರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಧನ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News