×
Ad

ಬೀದರ್ | ಕಾರು ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಮೃತ್ಯು

Update: 2025-10-23 13:01 IST

ಭೀಮಣ್ಣ

ಬೀದರ್ : ನಗರದ ಕುಂಬಾರವಾಡ ಬಡಾವಣೆಯಲ್ಲಿ ಕಾರೊಂದು ಢಿಕ್ಕಿ ಹೊಡೆದು ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ವರದಿಯಾಗಿದೆ‌.

ಮೃತರನ್ನು ನಗರದ ಕುಂಬಾರವಾಡ ಬಡಾವಣೆಯ ನಿವಾಸಿ ಭೀಮಣ್ಣ (76) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಸುಮಾರು 5:30 ಗಂಟೆಗೆ ವ್ಯಕ್ತಿಯೊಬ್ಬರು ಭೀಮಣ್ಣ ಬಡಾವಣೆಯಲ್ಲಿ ವಾಕಿಂಗ್ ಮಾಡುತಿದ್ದರು. ಈ ವೇಳೆ ಹಿಂದಿನಿಂದ ರಭಸವಾಗಿ ಬಂದ ಕಾರು ಭೀಮಣ್ಣ ಅವರ ಮೇಲೆ ಹರಿದಿದ್ದು, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಅವರ ಮೇಲೆ ಹರಿದ ದೃಶ್ಯವು ಪಕ್ಕದಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News