ಬೀದರ್ | ನಿಗಧಿತ ಅವಧಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಪೂರ್ಣಗೊಳಿಸಿ : ಸಿಇಓ ಡಾ.ಗಿರೀಶ್ ಬದೋಲೆ
ಬೀದರ್ : ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್) ಗ್ರಾಮದ SETTING UP OF 3KLD FAECAL SLUDGE TREATMENT PLANT IN ಕಾಮಗಾರಿಯ ಸ್ಥಳ ಪರಿಶೀಲಿಸಿ ಕೂಡಲೆ ಅಂದಾಜು ಪತ್ರಿಕೆಯಂತೆ ಕಾಮಗಾರಿ ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಬಸವಕಲ್ಯಾಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಸೂಚಿಸಿದರು.
ಇಂದು ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್), ಮಲ್ಲಿಕಾರ್ಜುನ್ ವಾಡಿ ಹಾಗೂ ಹುಲಸೂರ್ ತಾಲ್ಲೂಕಿನ ಗೋರ್ಟಾ (ಬಿ) ಗ್ರಾಮಗಳ ಜಲ ಜಿವನ ಮೀಷನ್ ಕಾಮಗಾರಿಗಳ ಪರಿವೀಕ್ಷಣೆ ಮಾಡಿ ಅವರು ಮಾತನಾಡಿದರು.
ಮಲ್ಲಿಕಾರ್ಜುನ್ ವಾಡಿ ಗ್ರಾಮದ ಜಲ ಜಿವನ ಮೀಷನ್ ಕಾಮಗಾರಿ ಪರಿಶೀಲಿಸಿದ ಅವರು, ಕಾಮಗಾರಿಯು ಈಗಾಗಲೇ ಹರ ಘರ ಜಲ್ ಗ್ರಾಮವೆಂದು ಘೋಷಿಸಿ, ಗ್ರಾಮ ಪಂಚಾಯತಿಗೆ ಹಸ್ತಾಂತರಿಸಲಾಗಿದೆ. ಕಾಮಗಾರಿಯ ಕಾರ್ಯಾಚರಣೆ ಮತ್ತು ನಿರ್ವಹಣೆಯು ಗ್ರಾಮ ಪಂಚಾಯತಿಯಿಂದ ನಿರ್ವಹಿಸಬೇಕಾಗಿದೆ. ಆದ್ದರಿಂದ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯು ಸಕ್ರಿಯಗೊಂಡು, ನಿಗದಿತ ಸಮಯಕ್ಕೆ ಸಭೆಗಳನ್ನು ಜರುಗಿಸಿ, ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯು ಉತ್ತಮ ರಿತಿಯಲ್ಲಿ ನಿರ್ವಹಿಸಬೇಕು ಎಂದು ಸಮಿತಿಯ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಶುಲ್ಟಿ ಹಾಗೂ ಬಸವಕಲ್ಯಾಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವರಾಜ್ ಪಲ್ಲೇರಿ ಸೇರಿದಂತೆ ಜಿಲ್ಲಾ ಯೋಜನಾ ವ್ಯವಸ್ಥಾಪಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಶಾಖಾಧಿಕಾರಿ, ಹಣಮಂತವಾಡಿ (ಆರ್), ಮಲ್ಲಿಕಾರ್ಜುನ್ ವಾಡಿ ಹಾಗೂ ಗೋರ್ಟಾ (ಬಿ) ಗ್ರಾಮಗಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇತರರು ಉಪಸ್ಥಿತರಿದ್ದರು.