×
Ad

Bidar | ಎಸ್‌ಐಆರ್ ವಿರೋಧಿಸಿ ಜು.15ರಂದು ಚಿಂತನಾ ಸಭೆ: ಓಂಪ್ರಕಾಶ್ ರೊಟ್ಟೆ

Update: 2026-07-14 19:18 IST

ಬೀದರ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಅಸಂವಿಧಾನಿಕವಾಗಿದ್ದು, ಬಡವರು, ಅಲೆಮಾರಿ ಸಮುದಾಯ, ರೈತರು, ಕೂಲಿ ಕಾರ್ಮಿಕರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಕಷ್ಟ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಜು.15ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಕನ್ನಡ ಸಾಹಿತ್ಯ ಸಂಘದಲ್ಲಿ ಚಿಂತನಾ ಸಭೆ ಆಯೋಜಿಸಲಾಗಿದೆ ಎಂದು ಎದ್ದೇಳು ಕರ್ನಾಟಕದ ಸಂಚಾಲಕ ಓಂಪ್ರಕಾಶ್ ರೊಟ್ಟೆ ತಿಳಿಸಿದ್ದಾರೆ.

ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಎದ್ದೇಳು ಕರ್ನಾಟಕ ಹಾಗೂ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು, ಸಾಹಿತಿಗಳು, ಕಲಾವಿದರು, ಕವಿಗಳು, ಸಮಾಜ ಚಿಂತಕರು ಹಾಗೂ ಜನಪರ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದರು.

ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ ಮುಂದಿನ ಹೋರಾಟದ ರೂಪುರೇಷೆಗಳನ್ನೂ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಬುದ್ಧ, ಬಸವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ವಿಚಾರಧಾರೆಯನ್ನು ಬೆಂಬಲಿಸುವ ಎಲ್ಲಾ ಪ್ರಗತಿಪರ ಚಿಂತಕರು ಸಭೆಯಲ್ಲಿ ಭಾಗವಹಿಸಿ, ಜನರ ಮತದಾನದ ಹಕ್ಕು ರಕ್ಷಿಸುವ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಓಂಪ್ರಕಾಶ್ ರೊಟ್ಟೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News