ಬೀದರ್ | ಕಲ್ಯಾಣ ಕರ್ನಾಟಕದ ವಿಭಾಗ ಮಟ್ಟದ ಮಾಧ್ಯಮ ತರಬೇತಿ : ಪತ್ರಕರ್ತರಿಗೆ ಆಹ್ವಾನ
ಬೀದರ್ : ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆ.6 ರಂದು ಬೀದರ್ ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯ ಎಲ್ಲ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸಮಾರಂಭವನ್ನು ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ 'ನ್ಯೂಸ್ ರೂಂ ನಲ್ಲಿ AI ಮತ್ತು ನಾನು' ಹಾಗೂ 'ಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನ' ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಪತ್ರಕರ್ತರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಈ ತರಬೇತಿಯು ಪತ್ರಕರ್ತರ ವೃತ್ತಿಕೌಶಲ್ಯವನ್ನು ಉತ್ತಮ ಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಇತರೆ ಜಿಲ್ಲೆಗಳಿಂದ ಆಗಮಿಸುವ ಮುಂಚಿತವಾಗಿಯೇ ನೋಂದಾಯಿಸಿಕೊಂಡಿರುವ ಪತ್ರಕರ್ತರಿಗೆ ತರಬೇತಿ ದಿನದಂದು ವಸತಿ ಸೌಲಭ್ಯ ಒದಗಿಸಲಾಗುವುದು. ಆಸಕ್ತರು https://forms.gle/uwoA67T1b5gBPDuB8 ಗೂಗಲ್ ಫಾರ್ಮ್ ಭರ್ತಿ ಮಾಡಿ ಆ.2 ರ ಒಳಗೆ ನೋಂದಾಯಿಸಿಕೊಳ್ಳಬಹುದು ಎಂದು ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ಅವರು ಮಾಹಿತಿ ನೀಡಿದ್ದಾರೆ.