×
Ad

ಬೀದರ್ | ಜು.10 ರಂದು ಲೋಕಾಯುಕ್ತ ಅಹವಾಲು ಸಭೆ

Update: 2025-07-08 16:52 IST

ಬೀದರ್ : ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಠಾಣೆ ವತಿಯಿಂದ ಜು.10 ರಂದು ಲೋಕಾಯುಕ್ತ ಅಹವಾಲು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಭಾಲ್ಕಿಯ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 5 ಗಂಟೆವರೆಗೆ ಕಮಲನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ, ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ.1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಬೀದರ್ ನ ಕರ್ನಾಟಕ ಲೋಕಾಯುಕ್ತ ಉಪಾಧೀಕ್ಷಕರವರ ಮೊಬೈಲ್ ಸಂಖ್ಯೆ : 93640 62571, ಲೋಕಾಯುಕ್ತ ಪೊಲೀಸ್ ನಿರೀಕ್ಷಕ-4 ಅವರ ಮೊಬೈಲ್ ಸಂಖ್ಯೆ : 93640 62675 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News