×
Ad

Bidar | ಎಸ್‌ಐಆರ್‌ಗೆ ಸಾರ್ವಜನಿಕರು ಸಹಕರಿಸಿ: ಭಗವಂತ್‌ ಖೂಬಾ ಮನವಿ

ಗಣತಿ ನಮೂನೆಗಳನ್ನು ನಿಗದಿತ ಅವಧಿಯಲ್ಲಿ ಬಿಎಲ್‌ಒಗಳಿಗೆ ಸಲ್ಲಿಸುವಂತೆ ಕರೆ

Update: 2026-07-09 18:14 IST

ಬೀದರ್: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಸಂಬಂಧಿತ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ್‌ ಖೂಬಾ ಮನವಿ ಮಾಡಿದರು.

ನಗರದ ವಾರ್ಡ್ ಸಂಖ್ಯೆ 30, 23 ಹಾಗೂ 1ರ ವಿವಿಧ ಬಡಾವಣೆಗಳಿಗೆ ಬುಧವಾರ ಭೇಟಿ ನೀಡಿ ಎಸ್‌ಐಆರ್ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಅವರು, ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅಗತ್ಯ ದಾಖಲೆಗಳೊಂದಿಗೆ ಗಣತಿ ನಮೂನೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶಶಿಧರ್ ಹೊಸಳ್ಳಿ, ಸುನಿಲ್ ಗೌಳಿ, ಮಹೇಶ್ ಪಾಲಂ ಸೇರಿದಂತೆ ವಾರ್ಡ್‌ಗಳ ಪ್ರಮುಖರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News