×
Ad

Bidar | ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

Update: 2026-03-10 19:48 IST

ಬೀದರ್: ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಕಾರುಗಳು ಹಾಗೂ ಕೇಬಲ್ ವೈರ್ ವಶಕ್ಕೆ ಪಡೆದಿದ್ದಾರೆ.

ಧನ್ನೂರು ಪೊಲೀಸ್ ಠಾಣೆಯ ಪಿಎಸ್‌ಐ ರಾಜಕುಮಾರ್ ಜಾಮಗೊಂಡ ಅವರ ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ರಚಿಸಿ, ಸಿಸಿಟಿವಿ ಕಂಟ್ರೋಲ್ ಕಮಾಂಡ್ ಸೆಂಟರ್‌ನ ಕ್ಯಾಮೆರಾ ದೃಶ್ಯಗಳು ಮತ್ತು ಬಾತ್ಮಿದಾರರಿಂದ ಪಡೆದ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳು ಧನ್ನೂರು ಪೊಲೀಸ್ ಠಾಣೆಯ ಒಂದು ಪ್ರಕರಣ ಹಾಗೂ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಎರಡು ಕಾರುಗಳು, 35 ಸಾವಿರ ರೂ. ನಗದು ಹಾಗೂ ಸುಮಾರು 3 ಸಾವಿರ ರೂ. ಮೌಲ್ಯದ 90 ಅಡಿ ಕೇಬಲ್ ವೈರ್ ಜಪ್ತಿ ಮಾಡಲಾಗಿದೆ.

ಈ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಶ್ಲಾಘಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಪತ್ತೆ ಕಾರ್ಯವನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News