×
Ad

ಬೀದರ್ | ಅಪರಿಚಿತ ವಾಹನ ಢಿಕ್ಕಿ : ಇಬ್ಬರು ಬೈಕ್ ಸವಾರರು ಮೃತ್ಯು

Update: 2025-03-22 11:52 IST

ಮೃತ ಬೈಕ್ ಸವಾರರು

ಬೀದರ್ : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಕ್ರಾಸ್ ಬಳಿ ನಡೆದಿದೆ.

ಸಿಂಧನಕೇರಾ ಗ್ರಾಮದ ನಿವಾಸಿಗಳಾದ ಸುಧಾಕರ್ ಹಾದಿಮನಿ (32) ಮತ್ತು ಸಂಜುಕುಮಾರ್ ಮೇತ್ರೆ (30) ಮೃತ ಬೈಕ್ ಸವಾರರು ಎಂದು ಗುರುತಿಸಲಾಗಿದೆ.

ಶುಕ್ರವಾರ ಬೈಕ್ ಮೇಲೆ ತೆರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಸಂಜುಕುಮಾರ್ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟರೆ, ಸುಧಾಕರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News