×
Ad

ಅರ್ಹ ಮತದಾರರನ್ನು ಎಸ್‌ಐಆರ್‌ನಿಂದ ವಂಚಿತರಾಗಲು ಕಾಂಗ್ರೆಸ್ ಅವಕಾಶ ಮಾಡಿಕೊಡುವುದಿಲ್ಲ : ಸಚಿವ ಯು.ಟಿ.ಖಾದರ್‌

"ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು"

Update: 2026-07-08 17:53 IST

ಬೀದರ್ : ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಸರ್ಕಾರದ ಕೆಲಸವಲ್ಲ, ಅದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಆಯೋಗದ ನಿಯಮಗಳ ಅನುಸಾರವೇ ಕಾರ್ಯ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.

ನಗರದ ಹಿಲಿಂಗ್ ಟ್ರೀ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಮಂಗಳವಾರ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಯಾವುದೇ ಅರ್ಹ ಮತದಾರರು ವಿಶೇಷವಾಗಿ ಬಡವರು, ನಿರ್ಗತಿಕರು ಹಾಗೂ ಅಶಿಕ್ಷಿತರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಅನೇಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನ್ಯಾಯಾಲಯದ ಮೊರೆ ಹೋಗಿರುವ ಉದಾಹರಣೆ ಇದೆ. ಕರ್ನಾಟಕದಲ್ಲಿ ಅಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರ್ವಪಕ್ಷಗಳ ಹಾಗೂ ಎಲ್ಲ ಮತದಾರರಿಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.

ಇದುವರೆಗೆ ಮತದಾನದ ಹಕ್ಕು ಇದ್ದರೂ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿದ ಬಳಿಕವೇ ಮತದಾನದ ಹಕ್ಕು ಮುಂದುವರಿಯಲಿದೆ. ಈ ನಮೂನೆ ಭರ್ತಿ ಮಾಡುವುದು ಸುಲಭದ ಕೆಲಸವಲ್ಲ. ಆದ್ದರಿಂದ ಜನಸಾಮಾನ್ಯರಿಗೆ ನೆರವಾಗುವುದು ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಖಾದರ್ ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಮತ್ತು ಬಿ.ಕೆ.ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಕ್ಷ ಒಗ್ಗಟ್ಟಿನಿಂದ ಜನಪರ ಆಡಳಿತ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News