ಬೀದರ್ನಲ್ಲಿ ಅತಿವೃಷ್ಟಿ ಹಾನಿ : ಸಿಎಂ ಸಿದ್ದರಾಮಯ್ಯ, ಸಚಿವ ಈಶ್ವರ್ ಖಂಡ್ರೆ ವೈಮಾನಿಕ ಸಮೀಕ್ಷೆ
Update: 2025-09-30 18:22 IST
ಬೀದರ್ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಅತಿವೃಷ್ಟಿ ಹಾಗೂ ಮಾಂಜ್ರಾ ಮತ್ತು ಕಾರಂಜಾ ನದಿಗಳ ಪ್ರವಾಹದಿಂದ ತತ್ತರಿಸಿದ ಪ್ರದೇಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.
ಜಿಲ್ಲೆಯ ಕೃಷಿಭೂಮಿ, ಮನೆಗಳು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾದ ಭಾರೀ ಹಾನಿ ಕುರಿತು ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.