×
Ad

ಬೀದರ್: ಜೂ.21 ರಂದು ಜೇಸ್ಕಾಂನ ಕುಂದು ಕೊರತೆ ನಿವಾರಣಾ ಸಭೆ

Update: 2025-06-18 19:58 IST

ಬೀದರ್ : ಜೂ.21 ರಂದು ಜೇಸ್ಕಾಂನ ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಉಪ ವಿಭಾಗಳ ಶಾಖೆಯಲ್ಲಿ ಕುಂದು ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ ಎಂದು ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೆ ಹುಮನಾಬಾದ್ ಉಪ ವಿಭಾಗದ ಪಟ್ಟಣ ಶಾಖೆ, ಮನ್ನಾಏಖೇಳ್ಳಿ ಉಪ ವಿಭಾಗದ ಚಿಟಗುಪ್ಪಾ ಶಾಖೆ ಹಾಗೂ ಬಸವಕಲ್ಯಾಣ ಉಪ ವಿಭಾಗದ ಭೋಸ್ಗಾ ಶಾಖೆಯ ಕಛೇರಿಯಲ್ಲಿ ಕುಂದು ಕೊರತೆ ನಿವಾರಣಾ ಸಭೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ಹಾಗೂ ಗು.ವಿ.ಸ.ಕಂ.ನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News