×
Ad

ಬೀದರ್: ಜು. 12 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್

Update: 2025-06-13 21:54 IST

ಬೀದರ್: ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಅವರು ತಿಳಿಸಿದರು.

ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜುಲೈ 12 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಪೂರ್ವಸಿದ್ಧತೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೃಹತ್ ಲೋಕ ಅದಾಲತ್‌ ನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣ, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದರು.

ಈ ಹಿಂದೆ ಮಾರ್ಚ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲಾದ್ಯಂತ ಒಟ್ಟು 52,812 ಪ್ರಕರಣಗಳು ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 10,044 ನ್ಯಾಯಾಲಯದಲ್ಲಿನ ಪೆಂಡಿಂಗ್ ಪ್ರಕರಣಗಳು, 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.

ಈ ಬಾರಿಯ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹೆಚ್ಚು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 29,122 ಪ್ರಕರಣಗಳು ಪೆಂಡಿಂಗ್ ಇದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ಎಲ್ಲಾ ಪೂರ್ವ ತಯಾರಿ ಮಾಡಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯದ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News