×
Ad

ಮದುವೆಯಾಗುವುದಾಗಿ ನಂಬಿಸಿ ಶಾಸಕ ಪ್ರಭು ಚೌವ್ಹಾಣ್‌ ಪುತ್ರನಿಂದ ಮೋಸ ಆರೋಪ : ಸಂತ್ರಸ್ತೆ ಕುಟುಂಬಸ್ಥರ ವಿರುದ್ಧವೂ ಪ್ರಕರಣ ದಾಖಲು

Update: 2025-07-21 17:29 IST

ಬೀದರ್ : ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಅವರ ಮಗ ಪ್ರತೀಕ್ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಪ್ರಕರಣ ದಾಖಲಾದ ಬೆನ್ನಲ್ಲೇ, ಈದೀಗ ಪ್ರಭು ಚೌವ್ಹಾಣ್ ಅವರ ಸಂಬಂಧಿಕ ಮುರಳೀಧರ್ ಪವಾರ್ ಎಂಬವರು ನೀಡಿದ ದೂರಿನನ್ವಯ ಸಂತ್ರಸ್ತೆಯ 8 ಜನ ಕುಟುಂಬಸ್ಥರ ವಿರುದ್ಧ ಹೊಕ್ರಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.5 ರ ರಾತ್ರಿ 8:30 ಗಂಟೆಗೆ ಪ್ರಭು ಚೌವ್ಹಾಣ್ ಅವರ ಮನೆಗೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೇಗಲೂರು ತಾಲೂಕಿನ ಹಣೆಗಾಂವ್ ಗ್ರಾಮದ ನಿವಾಸಿಗಳಾದ ಸುಮಾರು 30ಕ್ಕೂ ಹೆಚ್ಚು ಜನರ ತಂಡ ಕೊಲೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮನೆಗೆ ನುಗ್ಗಿದ್ದರು. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮಾರಕಾಸ್ತ್ರಗಳಿಂದ ಪೆಟ್ಟು ಬೀಳುವಾಗ ಶಾಸಕರು ತಪ್ಪಿಸಿಕೊಂಡಿದ್ದಾರೆ. ಅಲ್ಲದೇ ನನಗೆ, ಸಂಜು ರಾಥೋಡ್, ಪ್ರತೀಕ್ ಚೌವ್ಹಾಣ್ ಹಾಗೂ ಅಮಿತ್ ರಾಥೋಡ್ ಎಂಬುವವರಿಗೆ ಗಾಯಗಳಾಗಿವೆ. ಮಹಿಳೆಯರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ದೀಪಕ್ ಚಾಂದೋರಿ ಎಂಬ ವ್ಯಕ್ತಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸುಮಾರು ನಾಲ್ಕೈದು ವಾಹನಗಳಲ್ಲಿ ಕೊಲೆ ಮಾಡುವ ಉದ್ದೇಶದಿಂದ 30ಕ್ಕೂ ಹೆಚ್ಚು ಜನರು ಬಂದಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News